<p><strong>ಮಂಗಳೂರು: </strong>ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ, ಸಾವಿರ ಕೋಟಿ ಹಣ ಖರ್ಚು ಮಾಡಿದೆ ಎನ್ನುವುದನ್ನು ಜನರ ಮುಂದೆ ಒಪ್ಪಿಕೊಳ್ಳಲಿ ಎಂದು ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು, ಪ್ರಜಾಪ್ರಭುತ್ವದ ತತ್ವಕ್ಕೆ ಅನುಗುಣವಾಗಿ ಆಯ್ಕೆಯಾದ ಸರ್ಕಾರವನ್ನು ಪತನ ಮಾಡಲಾಗಿದೆ. ಶಾಸಕರನ್ನು ಕೂಡಿಟ್ಟು, ವಾಮ<br />ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ ಎಂದರು.</p>.<p>‘ಪ್ರತಿಯೊಬ್ಬ ಶಾಸಕರಿಗೆ ₹60 ರಿಂದ ₹70 ಕೋಟಿ ನೀಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ನೋಟು ರದ್ದತಿಯಿಂದ ಕಪ್ಪುಹಣ ಕಡಿಮೆ<br />ಯಾಗಿದೆ ಎಂದು ಹೇಳುವ ಬಿಜೆಪಿ, ಶಾಸಕರಿಗೆ ನೀಡಿರುವ ಹಣ ಯಾವುದು ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಜನತೆಗೆ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ತಿದ್ದುಪಡಿ ಮಾಡಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ, ಸಾವಿರ ಕೋಟಿ ಹಣ ಖರ್ಚು ಮಾಡಿದೆ ಎನ್ನುವುದನ್ನು ಜನರ ಮುಂದೆ ಒಪ್ಪಿಕೊಳ್ಳಲಿ ಎಂದು ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು, ಪ್ರಜಾಪ್ರಭುತ್ವದ ತತ್ವಕ್ಕೆ ಅನುಗುಣವಾಗಿ ಆಯ್ಕೆಯಾದ ಸರ್ಕಾರವನ್ನು ಪತನ ಮಾಡಲಾಗಿದೆ. ಶಾಸಕರನ್ನು ಕೂಡಿಟ್ಟು, ವಾಮ<br />ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ ಎಂದರು.</p>.<p>‘ಪ್ರತಿಯೊಬ್ಬ ಶಾಸಕರಿಗೆ ₹60 ರಿಂದ ₹70 ಕೋಟಿ ನೀಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ನೋಟು ರದ್ದತಿಯಿಂದ ಕಪ್ಪುಹಣ ಕಡಿಮೆ<br />ಯಾಗಿದೆ ಎಂದು ಹೇಳುವ ಬಿಜೆಪಿ, ಶಾಸಕರಿಗೆ ನೀಡಿರುವ ಹಣ ಯಾವುದು ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಜನತೆಗೆ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ತಿದ್ದುಪಡಿ ಮಾಡಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>