ಕಳೆದ ಜನವರಿ 20ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ಮಾಡಿದ್ದರು. ಆರೋಪಿ ವಿರುದ್ಧ ಬಿಡದಿ ಠಾಣೆಯಲ್ಲಿ ಕೊಲೆ ಯತ್ನ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು.
ಘಟನೆಯಲ್ಲಿ ಆನಂದ್ ಸಿಂಗ್ ಅವರ ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿತ್ತು, ಅವರನ್ನು ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಿಸಿಚಿಕಿತ್ಸೆ ನೀಡಲಾಗಿತ್ತು. ಆನಂದ್ ಸಿಂಗ್ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.