ಬೆಂಗಳೂರು: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮಲ್ಲೇಶ್ವರ ಶಾಸಕ ಅಶ್ವತ್ಥ್ ನಾರಾಯಣ ಅವರು ಕೆಲವು ಶಾಸಕರನ್ನು ಅಪಹರಿಸಿದ್ದಾರೆ. ಅವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ವಕೀಲ ಆರ್.ಎಲ್.ಎನ್. ಮೂರ್ತಿ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
‘ದೂರಿನಲ್ಲಿರುವ ಅಂಶಗಳು ಅಪೂರ್ಣವಾಗಿವೆ’ ಎಂದು ಪೊಲೀಸರು ಹೇಳಿದ್ದಾರೆ.