ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ದಿನವೂ ಕರೆ ಬರುತ್ತೆ: ಶಾಸಕ ಕೆ.ವೈ.ನಂಜೇಗೌಡ ಆರೋಪ

Last Updated 7 ಫೆಬ್ರುವರಿ 2019, 20:01 IST
ಅಕ್ಷರ ಗಾತ್ರ

ಮಾಲೂರು: ‘ಬಿಜೆಪಿ ಪಕ್ಷದ ಸ್ನೇಹಿತರಿಂದ ನನಗೂ ದಿನ ಕರೆ ಬರುತ್ತಿರುತ್ತದೆ. ಆದರೆ ನಾನು ನೋ ಸೇಲ್‌ ಎಂದು ಹೇಳಿದ್ದು, ನನ್ನ ತಂಟೆಗೆ ಬರಬೇಡಿ ಎನ್ನುವ ಮೂಲಕ ನಾನು ಕಾಂಗ್ರೆಸ್‌ನ ನಂಬಿಕಸ್ಥ ಶಾಸಕನಾಗಿದ್ದೇನೆ’ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹಾರೋಹಳ್ಳಿ ಗೇಟ್ ಬಳಿಯಿಂದ ಬಾವನಹಳ್ಳಿ ಗ್ರಾಮದವರೆಗೆ ₹ 5 ಕೋಟಿ ವೆಚ್ಚದ ಸುಮಾರು 11 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

‘ಬಿಜೆಪಿಗೆ ಕೋಲಾರ ಜಿಲ್ಲೆಯಲ್ಲಿ ಪಕ್ಷೇತರ ಶಾಸಕರೊಬ್ಬರು ಸೇಲ್‌ ಆಗಿದ್ದಾರೆ. ಇನ್ನೂ ಯಾರು ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ 5 ವರ್ಷ ಆಡಳಿತ ನಡೆಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಈ ಹಿಂದೆ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಮುಖಂಡರು ಜೈಲು ಸೇರಿ ದೇಶವೆ ಕರ್ನಾಟಕದ ಕಡೆ ನೋಡುವ ಹಾಗೆ ಮಾಡಿದ್ದರು. ಅವರಿಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT