ಮಾಧುಸ್ವಾಮಿ, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಂದ್ರಣ್ಣ, ‘ಶಾಸಕರಾಗಿ 11 ತಿಂಗಳು ಕಳೆದಿವೆ. ಈಗ ಗ್ರಾಮಕ್ಕೆ ಬಂದಿದ್ದೀರಿ. ನೀರಿಲ್ಲ. ನಮ್ಮ ಅನೇಕ ಸಮಸ್ಯೆಗಳು ಪರಿಹಾರ ಆಗಿಲ್ಲ. ನಮ್ಮ ಪ್ರಶ್ನೆಗೆ ಉತ್ತರಿಸಬೇಕು’ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶಾಸಕರು, ಚಂದ್ರಣ್ಣ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಜೆಡಿಎಸ್ ಮುಖಂಡರು ಹುಳಿಯಾರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.