'ನಾನು ಹೋರಾಟದ ಮೂಲಕವೇ ಶಾಸಕನಾಗಿದ್ದೇನೆ. ಕಾಂಗ್ರೆಸ್ ಸರ್ಕಾರ ಇದ್ದಾಗ 2003ರಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದಾಗ ನನ್ನನ್ನು ಬಂಧಿಸಿ 15 ದಿನಗಳ ಕಾಲ ಬೆಳಗಾವಿ ಜೈಲಿನಲ್ಲಿಟ್ಟಿದ್ದರು. ಹಿಂದೆ ಚುನಾವಣೆಗೆ 15 ದಿನಗಳಿರುವಾಗ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ವಿ.ಎಚ್.ಪಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಚಾರಕ್ಕೆ ನನ್ನನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದರು. ಕಾಂಗ್ರೆಸ್ ನಾಯಕರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಜೈಲಿಗೆ ಕಳುಹಿಸುವುದಾದರೆ ಕಳುಹಿಸಲಿ' ಎಂದು ರೇಣುಕಾಚಾರ್ಯ ಸವಾಲು ಹಾಕಿದರು.