ಬೆಂಗಳೂರು: ಭದ್ರಾ ಜಲಾಶಯದಿಂದ ಶಿವಮೊಗ್ಗದ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಶಿವಮೊಗ್ಗದ ‘ಕಾಡಾ’ (ನಾಲಾ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಕಚೇರಿಗೆ ನುಗ್ಗಿ ಅಧಿಕಾರಿಗಳ ಮೇಲೆ ಮೌಖಿಕ ದೌರ್ಜನ್ಯ ನಡೆಸಿದ ಆರೋಪದಿಂದ ಶಾಸಕ ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಕ್ತಗೊಳಿಸಿದೆ.
ಈ ಕುರಿತಂತೆ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಸೋಮವಾರ ಆದೇಶ ಪ್ರಕಟಿಸಿದರು.
ಬೆಂಬಲಿಗರೊಡನೆ ಕಚೇರಿಗೆ ಮುತ್ತಿಗೆ ಹಾಕಿ, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದ ಆರೋಪ ರೇಣುಕಾಚಾರ್ಯ ಮೇಲಿತ್ತು.