<p><strong>ಬೆಂಗಳೂರು:</strong> ಕೋವಿಡ್–19 ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಎಲ್ಲ ಸಚಿವರು, ಶಾಸಕರು, ಸಭಾಪತಿ ಮತ್ತು ಸಭಾಧ್ಯಕ್ಷರ ವೇತನ ಕಡಿತ ಹಾಗೈಊ ಕೆಲವು ಭತ್ಯೆಗಳಲ್ಲಿ ಶೇ 30ರಷ್ಟು ಕಡಿತ ಮಾಡಲು ಸರ್ಕಾರ ನಿರ್ಧರಿಸಿದೆ.</p>.<p>ಕೊರೊನಾ ತಡೆ ಕಾರ್ಯಾಚರಣೆಗೆ ಬೇಕಾದ ಸಂಪನ್ಮೂಲ ಕ್ರೋಡೀಕರಣಕ್ಕೆ ಚುನಾಯಿತ ಪ್ರತಿನಿಧಿಗಳ ವೇತನದಲ್ಲಿ ಕಡಿತ ಮಾಡಲು ಸರ್ಕಾರ ಚಿಂತನೆ ನಡೆಸಿತ್ತು. ಈ ಕುರಿತು ಅಭಿಪ್ರಾಯ ನೀಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿತ್ತು. ಇಲಾಖೆ ನೀಡಿದ ಅಭಿಪ್ರಾಯ ಆಧರಿಸಿ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ.</p>.<p>ಕರ್ನಾಟಕ ವಿಧಾನಮಂಡಲ ಸದಸ್ಯರ ವೇತನ, ಪಿಂಚಣಿ, ಮತ್ತು ಇತರ ಭತ್ಯೆಗಳ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 2020 ರ ಉಪಬಂಧ ಅನುಸಾರ ಸಂಬಳ, ದೂರವಾಣಿ ವೆಚ್ಚ, ಚುನಾವಣಾ ಕ್ಷೇತ್ರ ಭತ್ಯೆ, ಅಂಚೆ ವೆಚ್ಚ, ಕೊಠಡಿ ಸೇವಕರ ಭತ್ಯೆ, ನಿಗದಿತ ವಿಮಾನ ಮತ್ತು ರೈಲ್ವೆ ಪ್ರಯಾಣ ಭತ್ಯೆ(ವಾರ್ಷಿಕ) ಇವುಗಳಲ್ಲಿ ಶೇ 30 ಕಡಿತ ಮಾಡಲಾಗುವುದು.</p>.<p>ಸಭೆಗಳಿಗೆ ಹಾಜರಾಗಲು ನೀಡುವ ದಿನಭತ್ಯೆ (ರಾಜ್ಯದೊಳಗೆ ಮತ್ತು ರಾಜ್ಯದ ಹೊರಗೆ), ಪ್ರಯಾಣ ಭತ್ಯೆ, ವಾಹನ ಭತ್ಯೆ(ಪ್ರತಿ ಕಿ,ಮೀ.ಗೆ) ಇವುಗಳನ್ನು ಕಡಿತಗೊಳಿಸುವುದಿಲ್ಲ ಎಂದು ಆದೇಶ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್–19 ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಎಲ್ಲ ಸಚಿವರು, ಶಾಸಕರು, ಸಭಾಪತಿ ಮತ್ತು ಸಭಾಧ್ಯಕ್ಷರ ವೇತನ ಕಡಿತ ಹಾಗೈಊ ಕೆಲವು ಭತ್ಯೆಗಳಲ್ಲಿ ಶೇ 30ರಷ್ಟು ಕಡಿತ ಮಾಡಲು ಸರ್ಕಾರ ನಿರ್ಧರಿಸಿದೆ.</p>.<p>ಕೊರೊನಾ ತಡೆ ಕಾರ್ಯಾಚರಣೆಗೆ ಬೇಕಾದ ಸಂಪನ್ಮೂಲ ಕ್ರೋಡೀಕರಣಕ್ಕೆ ಚುನಾಯಿತ ಪ್ರತಿನಿಧಿಗಳ ವೇತನದಲ್ಲಿ ಕಡಿತ ಮಾಡಲು ಸರ್ಕಾರ ಚಿಂತನೆ ನಡೆಸಿತ್ತು. ಈ ಕುರಿತು ಅಭಿಪ್ರಾಯ ನೀಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿತ್ತು. ಇಲಾಖೆ ನೀಡಿದ ಅಭಿಪ್ರಾಯ ಆಧರಿಸಿ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ.</p>.<p>ಕರ್ನಾಟಕ ವಿಧಾನಮಂಡಲ ಸದಸ್ಯರ ವೇತನ, ಪಿಂಚಣಿ, ಮತ್ತು ಇತರ ಭತ್ಯೆಗಳ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 2020 ರ ಉಪಬಂಧ ಅನುಸಾರ ಸಂಬಳ, ದೂರವಾಣಿ ವೆಚ್ಚ, ಚುನಾವಣಾ ಕ್ಷೇತ್ರ ಭತ್ಯೆ, ಅಂಚೆ ವೆಚ್ಚ, ಕೊಠಡಿ ಸೇವಕರ ಭತ್ಯೆ, ನಿಗದಿತ ವಿಮಾನ ಮತ್ತು ರೈಲ್ವೆ ಪ್ರಯಾಣ ಭತ್ಯೆ(ವಾರ್ಷಿಕ) ಇವುಗಳಲ್ಲಿ ಶೇ 30 ಕಡಿತ ಮಾಡಲಾಗುವುದು.</p>.<p>ಸಭೆಗಳಿಗೆ ಹಾಜರಾಗಲು ನೀಡುವ ದಿನಭತ್ಯೆ (ರಾಜ್ಯದೊಳಗೆ ಮತ್ತು ರಾಜ್ಯದ ಹೊರಗೆ), ಪ್ರಯಾಣ ಭತ್ಯೆ, ವಾಹನ ಭತ್ಯೆ(ಪ್ರತಿ ಕಿ,ಮೀ.ಗೆ) ಇವುಗಳನ್ನು ಕಡಿತಗೊಳಿಸುವುದಿಲ್ಲ ಎಂದು ಆದೇಶ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>