ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷರಾಗಿ ಶಾಸಕ ಸುಧಾಕರ್‌ ದಿಢೀರ್‌ ನೇಮಕ

ಕೆಎಸ್‌ಪಿಸಿಬಿ ಅಧ್ಯಕ್ಷ ದಿಢೀರ್‌ ಬದಲು ಜಯರಾಂ ರಾಜೀನಾಮೆ
Last Updated 20 ಜೂನ್ 2019, 11:08 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ಮಂಡಳಿಯ ಅಧ್ಯಕ್ಷ ಸಿ.ಜಯರಾಂ ಅವರು ಗುರುವಾರ ಬೆಳಿಗ್ಗೆ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕೆ. ಸುಧಾಕರ್ ಅವರನ್ನು ನೇಮಕ ಮಾಡಬೇಕು ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನಾಲ್ಕು ತಿಂಗಳ ಹಿಂದೆ ಶಿಫಾರಸು ಮಾಡಿದ್ದರು. ತಜ್ಞರನ್ನಷ್ಟೇ ಮಂಡಳಿಗೆ ನೇಮಕ ಮಾಡಬೇಕು ಎಂಬ ಕಾರಣ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಧಾಕರ್‌ ನೇಮಕಕ್ಕೆ ಒಪ್ಪಿರಲಿಲ್ಲ.

ಈ ವರ್ಷ ಫೆಬ್ರುವರಿ 28ರಂದು ಸೇವೆಯಿಂದ ನಿವೃತ್ತರಾಗಿದ್ದ ಐಎಫ್ಎಸ್‌ ಅಧಿಕಾರಿ ಸಿ. ಜಯರಾಮ್‌ ಅವರನ್ನು ಈ ಹುದ್ದೆಗೆ ನೇಮಿಸಿದ್ದರು.ಈ ವಿಚಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು.

ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್‌ ಅವರು ಮೈತ್ರಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿಯೇ ಟೀಕೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT