ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಾಟಕ್ಕಿಲ್ಲ: ಶಾಸಕ ಸುರೇಶ್ ಗೌಡ ಸ್ಪಷ್ಟನೆ

Last Updated 18 ಡಿಸೆಂಬರ್ 2019, 19:42 IST
ಅಕ್ಷರ ಗಾತ್ರ

ನಾಗಮಂಗಲ: ‘ನಾನು ಬಿಜೆಪಿ ಸೇರುತ್ತೇನೆ ಎಂಬ ಸುಳ್ಳು ಸುದ್ದಿ ಎರಡು ಮೂರು ದಿನಗಳಿಂದ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದೆ. ನಾನು ಮಾರಾಟಕ್ಕಿಲ್ಲ, ಯಾವ ಪಕ್ಷಕ್ಕೂ ಹೋಗುವುದಿಲ್ಲ’ ಎಂದು ಶಾಸಕ ಸುರೇಶ್ ಗೌಡ ಬುಧವಾರ ಇಲ್ಲಿ ಸ್ಪಷ್ಟಪಡಿಸಿದರು.

‘ನಾನು ಜೆಡಿಎಸ್‌ನ ಶಿಸ್ತಿನ ಸಿಪಾಯಿ. ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹಲವು ಸಲ ಸ್ಪಷ್ಟಪಡಿಸಿದ್ದೇನೆ. ಆದರೆ, ಮಾಧ್ಯಮದವರು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಪಕ್ಷ ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಬಿಟ್ಟು ಹೋಗುವುದಿಲ್ಲ. ಮಾಧ್ಯಮದವರನ್ನು ಮೆಚ್ಚಿಸಲು ನಾನೇನು ಎದೆ ಬಗೆದು ತೋರಿಸಬೇಕಾ’ ಎಂದು ಅವರು ಪ್ರಶ್ನಿಸಿದರು.

ಸುಳ್ಳುಸುದ್ದಿಗಳಿಗೆ ಕಿವಿಗೊಡ ದಂತೆ ಕ್ಷೇತ್ರದ ಜನರಿಗೆ ಮನವಿ ಮಾಡಿದ ಅವರು, ‘ಗಾಳಿ ಸುದ್ದಿ ಪ್ರಸಾರ ಮಾಡಬೇಡಿ. ನನ್ನನ್ನು ಕೇಳಿ ಖಚಿತಪಡಿಸಿಕೊಂಡ ಬಳಿಕ ಸುದ್ದಿ ಬಿತ್ತರಿಸಿ’ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT