ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳನ್ನು ಬೆಂಬಲಿಸಿದರೆ ಸಂಸತ್ತಿನಲ್ಲಿ ಕನ್ನಡಿಗರ ಧ್ವನಿ ಕೇಳಿಸಲಿದೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ, ‘ಭಾಷೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಬಿಜೆಪಿಯ 17 ಸಂಸದರೂ ಕನ್ನಡಿಗರೇ ಆಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನೂರಕ್ಕೆ ನೂರರಷ್ಟು ಕನ್ನಡಿಗ ಅಭ್ಯರ್ಥಿಗಳನ್ನೇ ನಿಲ್ಲಿಸಲಾಗುವುದು. ಎಲ್ಲರೂ ರಾಜ್ಯದ ನೆಲ, ಜಲ ಸಂರಕ್ಷಣೆಗೆ ಬದ್ಧರಾಗಿರುತ್ತಾರೆ’ ಎಂದರು.