<p><strong>ಹುಕ್ಕೇರಿ:</strong> ‘ನನ್ನ ಯೋಗ್ಯತೆಗೆ ಯಡಿಯೂರಪ್ಪ ಅವರಿರುವ ಮುಖ್ಯಮಂತ್ರಿ ಸ್ಥಾನ ಸಿಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ದೇವರ ಆಶೀರ್ವಾದ ಇದ್ದರೆ ಮುಂದೆ ನೋಡೋಣ’ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.</p>.<p>ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ. ಇದುವರೆಗೆ ನನ್ನ ಹೆಂಡ್ತಿ ಮೇಲೆಯೇ ಮುನಿಸಿಕೊಂಡಿಲ್ಲ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಏಕೆ ಮುನಿಸಿಕೊಳ್ಳಲಿ‘ ಎಂದರು.</p>.<p>‘ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ನನ್ನನ್ನು ಕೈಬಿಟ್ಟಿರಬಹುದು. ನನ್ನ ನಸೀಬಿನಲ್ಲಿ (ಹಣೆಬರಹ) ಸಚಿವ ಸ್ಥಾನ ಇಲ್ಲ. ಹೀಗಾಗಿ ಸಿಕ್ಕಿಲ್ಲ. 13 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಮುಂದೆ ಸಚಿವ ಸ್ಥಾನ ಸಿಗಬಹುದು. ಸಿಕ್ಕಾಗ ನೋಡೋಣ’ ಎಂದು ನುಡಿದರು.</p>.<p>ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಶ್ರೀಮಂತ ಪಾಟೀಲ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರಿಗೆ ನನಗಿಂತ ಹೆಚ್ಚು ಅನುಭವ ಇದೆ. ಅದಕ್ಕೆ ಅವರಿಗೆ ನೀಡಿರಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ‘ನನ್ನ ಯೋಗ್ಯತೆಗೆ ಯಡಿಯೂರಪ್ಪ ಅವರಿರುವ ಮುಖ್ಯಮಂತ್ರಿ ಸ್ಥಾನ ಸಿಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ದೇವರ ಆಶೀರ್ವಾದ ಇದ್ದರೆ ಮುಂದೆ ನೋಡೋಣ’ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.</p>.<p>ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ. ಇದುವರೆಗೆ ನನ್ನ ಹೆಂಡ್ತಿ ಮೇಲೆಯೇ ಮುನಿಸಿಕೊಂಡಿಲ್ಲ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಏಕೆ ಮುನಿಸಿಕೊಳ್ಳಲಿ‘ ಎಂದರು.</p>.<p>‘ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ನನ್ನನ್ನು ಕೈಬಿಟ್ಟಿರಬಹುದು. ನನ್ನ ನಸೀಬಿನಲ್ಲಿ (ಹಣೆಬರಹ) ಸಚಿವ ಸ್ಥಾನ ಇಲ್ಲ. ಹೀಗಾಗಿ ಸಿಕ್ಕಿಲ್ಲ. 13 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಮುಂದೆ ಸಚಿವ ಸ್ಥಾನ ಸಿಗಬಹುದು. ಸಿಕ್ಕಾಗ ನೋಡೋಣ’ ಎಂದು ನುಡಿದರು.</p>.<p>ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಶ್ರೀಮಂತ ಪಾಟೀಲ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರಿಗೆ ನನಗಿಂತ ಹೆಚ್ಚು ಅನುಭವ ಇದೆ. ಅದಕ್ಕೆ ಅವರಿಗೆ ನೀಡಿರಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>