ಬೆಂಗಳೂರು:‘ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದ್ರೆ ಎಲ್ಲಾ ಸೆಟಲ್ ಆಗುತ್ತೆ. ರಾಜೀನಾಮೆಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ’ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
12 ಶಾಸಕರ ರಾಜೀನಾಮೆ ನಂತರ ಅತೃಪ್ತ ಶಾಸಕರ ಮನವೊಲಿಕೆಯ ಯತ್ನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಏನೂ ಗೊತ್ತಿಲ್ಲ ಅನ್ನೋಥರ ಇದ್ದಾರೆ’ ಎಂದರು.
‘ಯಾವ ಬಿಲ್ಡರ್ಗೆ ಕಾಲ್ ಮಾಡಿ ಎಷ್ಟೆಷ್ಟು ಹಣ ವಸೂಲಿಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಕಾದು ನೋಡಿ’ ಎಂದು ಹೇಳಿದರು.