<p><strong>ಕಲಬುರ್ಗಿ: </strong>ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಸದಸ್ಯತ್ವ ಅವಧಿ ಮುಗಿಯಲಿದ್ದು, ಅವರ ಸ್ಥಾನಕ್ಕೆ ಕೋಲಿ ಸಮಾಜದವರನ್ನೇ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿ ಅಧ್ಯಕ್ಷ ಅವಣ್ಣ ಮ್ಯಾಕೇರಿ ಒತ್ತಾಯಿಸಿದರು.</p>.<p>‘ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಕೋಲಿ ಸಮಾಜದವರು ಪ್ರಮುಖ ಪಾತ್ರವಹಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸಮಾಜದವರ ಬೇಡಿಕೆ ಈಡೇರಿಸಲು ಬಿಜೆಪಿ ಗಮನ ಹರಿಸಬೇಕು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಕೋಲಿ ಸಮಾಜವು ಹಿಂದುಳಿದಿದ್ದು, ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ವಿಧಾನ ಪರಿಷತ್ತಿನ ಸದಸ್ಯ ಸ್ಥಾನ ದೊರತಲ್ಲಿ, ಸಮಾಜಕ್ಕೆ ನ್ಯಾಯ ಸಿಗುತ್ತದೆ ಮತ್ತು ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ’ ಎಂದು ಅವರು ವಿವರಿಸಿದರು.</p>.<p>‘ಕೋಲಿ ಸಮಾಜದ ಪ್ರಮುಖ ರಾಜಕೀಯ ನಾಯಕರಲ್ಲಿ ಯಾರನ್ನೇ ನೇಮಕ ಮಾಡಿದರೂ ನಮ್ಮದೇನೂ ಅಭ್ಯಂತರವಿಲ್ಲ. ಎಲ್ಲಾ ರೀತಿಯ ಭಿನ್ನಾಭಿಪ್ರಾಯ ಬದಿಗಿಟ್ಟು ಪಕ್ಷವು ನೇಮಿಸಿದವರನ್ನು ಸ್ವಾಗತಿಸಲಾಗುವುದು’ ಎಂದು ಮ್ಯಾಕೇರಿ ತಿಳಿಸಿದರು. ಸಮಾಜದ ಮುಖಂಡರಾದ ದಯಾನಂದ ಕಟ್ಟಿಮನಿ, ಮಲ್ಲಿಕಾರ್ಜುನ ಎಮ್ಮೆಗನೂರ, ಶಿವಕುಮಾರ ಯಾಗಪುರ, ವಿಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಸದಸ್ಯತ್ವ ಅವಧಿ ಮುಗಿಯಲಿದ್ದು, ಅವರ ಸ್ಥಾನಕ್ಕೆ ಕೋಲಿ ಸಮಾಜದವರನ್ನೇ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿ ಅಧ್ಯಕ್ಷ ಅವಣ್ಣ ಮ್ಯಾಕೇರಿ ಒತ್ತಾಯಿಸಿದರು.</p>.<p>‘ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಕೋಲಿ ಸಮಾಜದವರು ಪ್ರಮುಖ ಪಾತ್ರವಹಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸಮಾಜದವರ ಬೇಡಿಕೆ ಈಡೇರಿಸಲು ಬಿಜೆಪಿ ಗಮನ ಹರಿಸಬೇಕು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಕೋಲಿ ಸಮಾಜವು ಹಿಂದುಳಿದಿದ್ದು, ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ವಿಧಾನ ಪರಿಷತ್ತಿನ ಸದಸ್ಯ ಸ್ಥಾನ ದೊರತಲ್ಲಿ, ಸಮಾಜಕ್ಕೆ ನ್ಯಾಯ ಸಿಗುತ್ತದೆ ಮತ್ತು ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ’ ಎಂದು ಅವರು ವಿವರಿಸಿದರು.</p>.<p>‘ಕೋಲಿ ಸಮಾಜದ ಪ್ರಮುಖ ರಾಜಕೀಯ ನಾಯಕರಲ್ಲಿ ಯಾರನ್ನೇ ನೇಮಕ ಮಾಡಿದರೂ ನಮ್ಮದೇನೂ ಅಭ್ಯಂತರವಿಲ್ಲ. ಎಲ್ಲಾ ರೀತಿಯ ಭಿನ್ನಾಭಿಪ್ರಾಯ ಬದಿಗಿಟ್ಟು ಪಕ್ಷವು ನೇಮಿಸಿದವರನ್ನು ಸ್ವಾಗತಿಸಲಾಗುವುದು’ ಎಂದು ಮ್ಯಾಕೇರಿ ತಿಳಿಸಿದರು. ಸಮಾಜದ ಮುಖಂಡರಾದ ದಯಾನಂದ ಕಟ್ಟಿಮನಿ, ಮಲ್ಲಿಕಾರ್ಜುನ ಎಮ್ಮೆಗನೂರ, ಶಿವಕುಮಾರ ಯಾಗಪುರ, ವಿಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>