ವಿಜಯಪುರದ ಪ್ರಕಾಶ್ ಅವರು ಕಾಂಗ್ರೆಸ್ನ ವಿವಿಧ ಸಮಿತಿಗಳಲ್ಲಿ ಅನೇಕ ವರ್ಷದಿಂದ ಕೆಲಸ ಮಾಡಿದವರು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಪರಿಷತ್ತಿನ ಸದಸ್ಯರಾಗಿ ಕಾರ್ಯನಿರ್ವಹಿಸಿದರು. ಎರಡು ಬಾರಿ ಲೋಕಸಭೆ, ಒಂದು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಲಂಬಾಣಿ ಸಮುದಾಯದವರಾದ ಇವರನ್ನು ಕ್ರೀಡಾ ಕೋಟಾದಡಿ ನಾಮ ನಿರ್ದೇಶನ ಮಾಡಲಾಗಿದೆ. ಇವರ ಪರವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಭಾವ ಬೀರಿದ್ದರು.