ಹುಬ್ಬಳ್ಳಿ: ಶಾಸಕರು, ಸಂಸದರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಅವಧಿಗೂ ಮುನ್ನವೇ ರಾಜೀನಾಮೆ ನೀಡಿ ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಂಡಾಗ, ಅದೇ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅಂಥವರಿಗೆ ಅವಕಾಶ ನಿರ್ಬಂಧಿಸಲು ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.