‘ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ನೆರವಿಗೆ ಬರುವುದು ಸರ್ಕಾರದ ಕರ್ತವ್ಯ. ನಿಯಮಕ್ಕೆ ಅಂಟಿಕೊಂಡು ಕೆಲಸ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಿಯಮ ಸಡಿಲಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲ, ಕೂಲಿ ಕೂಡ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ. ಬರಪೀಡಿತ ಪ್ರದೇಶದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕುಡಿಯುವ ನೀರು, ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಯಾ ಜಿಲ್ಲಾ ಆಡಳಿತಕ್ಕೆ ಸೂಚನೆ ಕೊಡಲಾಗಿದೆ’ ಎಂದು ಮಾಹಿತಿ ನೀಡಿದರು.