ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತ್ರಿ ಕೆಲಸದ ದಿನ ಹೆಚ್ಚಳ: ಕೃಷಿ ಸಚಿವ ಬಂಡೆಪ್ಪ ಕಾಶೆಂಪುರ

Last Updated 31 ಜನವರಿ 2019, 12:04 IST
ಅಕ್ಷರ ಗಾತ್ರ

ಹೊಸಪೇಟೆ: ‘ಬರಪೀಡಿತ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ವರ್ಷಕ್ಕೆ 150 ದಿನಕ್ಕಿಂತ ಹೆಚ್ಚು ದಿನ ಕೆಲಸ ಕೊಡಲಾಗುವುದು. ಇದು ಫೆ. 1ರಿಂದಲೇ ಜಾರಿಗೆ ಬರಲಿದೆ’ ಎಂದು ಕೃಷಿ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದರು.

ಬರಪೀಡಿತ ಕೊಟ್ಟೂರಿನ ಅಲಬೂರು ಗ್ರಾಮದಲ್ಲಿ ಗುರುವಾರ ಬರ ವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬರಗಾಲದಲ್ಲಿ ಯಾವುದೇ ನಿಯಮ ಬೇಡ. 150 ದಿನ ಕೆಲಸ ಮಾಡಿದವರಿಗೂ ಪುನಃ ಹೆಸರು ನೋಂದಣಿ ಮಾಡಿಸಿಕೊಂಡು ಕೆಲಸ ಕೊಡಬೇಕು. ಬರಗಾಲ ದೂರವಾಗುವವರೆಗೆ ಇದು ಮುಂದುವರಿಯಲಿದೆ’ ಎಂದು ತಿಳಿಸಿದರು.

‘ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ನೆರವಿಗೆ ಬರುವುದು ಸರ್ಕಾರದ ಕರ್ತವ್ಯ. ನಿಯಮಕ್ಕೆ ಅಂಟಿಕೊಂಡು ಕೆಲಸ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಿಯಮ ಸಡಿಲಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲ, ಕೂಲಿ ಕೂಡ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ. ಬರಪೀಡಿತ ಪ್ರದೇಶದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕುಡಿಯುವ ನೀರು, ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಯಾ ಜಿಲ್ಲಾ ಆಡಳಿತಕ್ಕೆ ಸೂಚನೆ ಕೊಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT