ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ (ಎನ್ಪಿಸಿಬಿ) ಅಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ದೃಷ್ಟಿದೋಷ ಸಮಸ್ಯೆಯನ್ನು ಪತ್ತೆ ಮಾಡಿ, ಅಗತ್ಯ ಚಿಕಿತ್ಸೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಶಾಲಾ ಮಕ್ಕಳ ಕಣ್ಣಿನ ಪ್ರಾಥಮಿಕ ತಪಾಸಣೆ ಕೂಡಾ ಒಂದಾಗಿದ್ದು,ಐದು ವರ್ಷದಲ್ಲಿ 5.67 ಲಕ್ಷ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಇರುವುದು ದೃಢಪಟ್ಟಿದೆ.