ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಎಲ್ಲೇ ಹೋದರೂ ಅಭಿವೃದ್ಧಿಗಾಗಿ ಪ್ರಬಲ ಸರ್ಕಾರ ಬೇಕು ಎಂದು ಹೇಳುತ್ತಾರೆ. ಸ್ಥಿರ ಸರ್ಕಾರ ಇದ್ದಾಗಲೇ ಭಯೋತ್ಪಾದಕರ ದಾಳಿ ನಡೆದಿಲ್ಲವೇ? ಮಾತೆತ್ತಿದರೆ ತಾನು ಮತ್ತು ತನ್ನ ಸರ್ಕಾರ ಎನ್ನುತ್ತಾರೆ. ಹೇಳಿದ್ದನ್ನೇ ಪದೇ ಪದೇ ಹೇಳಿದರೆ ಜನ ನಂಬುವುದಿಲ್ಲ. ಮಾತನಾಡುವುದು ಸುಲಭ, ಅನುಷ್ಠಾನಕ್ಕೆ ತರುವುದು ಕಷ್ಟ’ ಎಂದರು.