ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಡೆಯುವ ದಿನವಾದ ಗುರುವಾರವೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದೀಗೌಡರ ಪರವಾಗಿ ಹಾಗೂ ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಮತ ಯಾಚನೆ ಮಾಡಲಿದ್ದಾರೆ.