ಈ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪೀಠವು, ಇಡೀ ದೇಶದಲ್ಲಿ ಇತ್ಯರ್ಥವಾಗಲು ಬಾಕಿ ಉಳಿದಿರುವ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಕೇಂದ್ರ ಮತ್ತು ದೂರುದಾರರ ಪರ ವಕೀಲರಿಗೆ ಕೇಳಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮಾರ್ಗೋಪಾಯ ಕಂಡು ಹಿಡಿಯಲು ಇದು ಸಹಕಾರಿಯಾಗಲಿದೆ ಎಂದು ಪೀಠ ಹೇಳಿದೆ.