ಬೆಂಗಳೂರು: ಪ್ರಧಾನಿ ಮೋದಿಯವರಿಗೆ ಸೆಲೆಬ್ರಿಟಿಗಳ ಮದುವೆಗೆ ಹೋಗಲು, ಸಿನಿಮಾ ನಟರನ್ನು ಭೇಟಿ ಮಾಡಲು ಸಮಯವಿದೆ.ಆದರೆ ಬಡವರ ಒಳಿತಿಗಾಗಿ ದುಡಿದ ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಬರಲು ಸಮಯವಿಲ್ಲ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ ಎಂಬ ಒತ್ತಾಯವನ್ನೂ ಯಾರೂ ಪರಿಗಣಿಸಿಲ್ಲ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.