ಹಿರಿಯ ಕ್ರಿಮಿನಲ್ ವಕೀಲರೊಬ್ಬರ ಪ್ರಕಾರ, ‘ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಚಿವರಿಗೆ ನೋಟಿಸ್ ನೀಡಬಹುದು. ವಿಚಾರಣೆ ವೇಳೆ ತನಿಖಾಧಿಕಾರಿಯ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡದಿದ್ದರೆ, ಪ್ರಕರಣದಲ್ಲಿ ಅವರ ಪಾತ್ರ ಇದೆ ಎಂದು ಕಂಡುಬಂದರೆ ಅವರನ್ನು ಬಂಧಿಸಲು ಅವಕಾಶವಿದೆ. ಆದರೆ, ಬಂಧಿಸುವ ಮುನ್ನ ಮುಖ್ಯಮಂತ್ರಿ ಅನುಮತಿ ಪಡೆಯಬೇಕಾಗುತ್ತದೆ. ಅನುಮತಿ ನೀಡಲು ಮುಖ್ಯಮಂತ್ರಿಗೆ ಮೂರು ತಿಂಗಳ ಕಾಲಾವಕಾಶವಿದೆ’.