ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ನಿಷೇಧಕ್ಕಾಗಿ ‘ಮನಿ ಆರ್ಡರ್’ ಚಳವಳಿ!

Last Updated 18 ಮೇ 2020, 21:36 IST
ಅಕ್ಷರ ಗಾತ್ರ

ರಾಯಚೂರು/ಧಾರವಾಡ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲು ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಮನಿ ಆರ್ಡರ್‌ ಮೂಲಕ ಹಣ ಕಳಿಸುವ ಚಳವಳಿಗೆ ಸೋಮವಾರ ಚಾಲನೆ ನೀಡಿದರು.

ರಾಯಚೂರಿನಲ್ಲಿ‘ಮದ್ಯ ನಿಷೇಧ ಆಂದೋಲನ’ದ ಆರು ಮಂದಿ ಸದಸ್ಯರು ಕೇಂದ್ರ ಅಂಚೆ ಕಚೇರಿಗೆ ತೆರಳಿ ತಲಾ₹ 50 ಮನಿ ಆರ್ಡರ್ ಮಾಡಿದರು. ಸಂಘಟನೆ ಸಂಚಾಲಕಿ ವಿದ್ಯಾ ಪಾಟೀಲ, ಪದಾಧಿಕಾರಿಗಳಾದ ಶೋಭಾ, ಮಾಳಮ್ಮ, ಗುರುರಾಜ, ಬಸವರಾಜ ಇದ್ದರು.

‘ಲಾಕ್‌ಡೌನ್‌ನಲ್ಲಿ ಮದ್ಯಮಾರಾಟ ಸ್ಥಗಿತವಾಗಿದ್ದ ಕಾರಣ ಮಹಿಳೆಯರು, ಮಕ್ಕಳು ನೆಮ್ಮದಿಯಾಗಿದ್ದರು. ಈಗ ಆದಾಯದ ನೆಪ ಹೇಳಿ ವಿರೋಧದ ನಡುವೆಯೂ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ’ ಎಂದು ಟೀಕಿಸಿದರು.

ಬೀದರ್‌ ಜಿಲ್ಲೆ ಹುಮನಾಬಾದ್‌ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿಯೂಗ್ರಾಮೀಣ ಕೂಲಿಕಾರ್ಮಿಕರ ಸಂಘದ ಜಿಲ್ಲಾ ಸಂಯೋಜಕಿ ಸಪ್ನಾ ಭಾವಿಮನಿ ನೇತೃತ್ವದಲ್ಲಿ ‘ಮನಿ ಆರ್ಡರ್‌’ ಕಳಿಸುವ ಚಳವಳಿ ನಡೆಯಿತು.

ಧಾರವಾಡ ವರದಿ:ಹೋರಾಟಗಾರ್ತಿ ಶಾರದಾ ದಾಬಡೆ ನೇತೃತ್ವದಲ್ಲಿ ಜಿಲ್ಲೆಯ ಮಹಿಳೆಯರು ಸಮೀಪದ ಅಂಚೆ ಕಚೇರಿಯಲ್ಲಿ ಸಿ.ಎಂಗೆ ತಲಾ ₹10, ₹20 ಮನಿ ಆರ್ಡರ್ ಮಾಡಿ, ಮದ್ಯ ನಿಷೇಧದ ಫಲಕ ಪ್ರದರ್ಶಿಸಿ ಒತ್ತಾಯಿಸಿದರು.

ಈ ಕುರಿತು ಮಾತನಾಡಿದ ಶಾರದಾ ದಾಬಡೆ,‘ಮದ್ಯ ಮಾರಾಟಕ್ಕೆ ಅವಕಾಶ ನೀಡುವುದರಿಂದ ಅಪರಾಧ ಪ್ರಕರಣ, ದೌರ್ಜನ್ಯ ಹೆಚ್ಚಲಿದೆ. ಆದಾಯವಿಲ್ಲದೆ ಮದ್ಯ ವ್ಯಸನಿಗಳು ಮನೆಯಲ್ಲಿದ್ದ ಅಳಿದುಳಿದ ಸಾಮಾನುಗಳನ್ನೆಲ್ಲ ಮದ್ಯದ ಅಂಗಡಿಗಳಿಗೆ ಅಡವು ಇಡುತ್ತಿದ್ದಾರೆ. ಹೀಗಾಗಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ' ಎಂದರು.

‘ಮದ್ಯ ನಿಷೇಧ ಮಾಡಿ ನಮಗೆ ಬದುಕಲು ಅವಕಾಶ ಮಾಡಿಕೊಡಿ ಎಂಬ ಸಂದೇಶವನ್ನು ಸರ್ಕಾರಕ್ಕೆ ರವಾನೆ ಮಾಡುವುದು ಈ ಪ್ರತಿಭಟನೆಯ ಉದ್ದೇಶ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT