ಬೆಂಗಳೂರು: ‘ಹತ್ತು ಸಾವಿರ ಕಲಾವಿದರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ₹ 2 ಕೋಟಿ ಮೀಸಲಟ್ಟಿದೆ. ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಶೀಘ್ರದಲ್ಲಿಯೇ ಅಗತ್ಯ ನೆರವು ಸಿಗಲಿದೆ’ ಎಂದುಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ತಿಳಿಸಿದ್ದಾರೆ.
‘ಪರಿಷತ್ತಿನಿಂದ ಕಲಾವಿದರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳ ಜತೆಯೂ ಈ ಬಗ್ಗೆ ಚರ್ಚಿಸಲಾಗಿದೆ. ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಕಲಾವಿದರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆ’ ಎಂದು ಹೇಳಿದ್ದಾರೆ.