‘50,083 ಹೆಕ್ಟೇರ್ನಲ್ಲಿ ತರಕಾರಿ, 41,054 ಹೆಕ್ಟೇರ್ನಲ್ಲಿ ಹಣ್ಣು ಬಳೆಯಲಾಗಿದೆ. ಪ್ರತಿ ಹೆಕ್ಟೇರ್ಗೆ ₹ 15 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ ₹ 137 ಕೋಟಿ ತೆಗೆದಿರಿಸಿದೆ. ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಬೆಳೆ ನಷ್ಟ ಆಗಿರುವ ಯಾವುದೇ ರೈತನ ಹೆಸರು ಪಟ್ಟಿಯಿಂದ ಕೈ ತಪ್ಪಿದ್ದಲ್ಲಿ, ಪಟ್ಟಿಗೆ ಸೇರಿಸಲು ಅವಕಾಶ ಇದೆ. ಸಂಪೂರ್ಣ ಮಾಹಿತಿ ಕಲೆ ಹಾಕಿ, ಅತಿ ಶೀಘ್ರದಲ್ಲಿ ಹಣವನ್ನು ನೇರವಾಗಿ ರೈತರ ಖಾತೆಗೆ ಹಾಕುತ್ತೇವೆ’ ಎಂದರು.