ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಎರಡು ದಿನಗಳಿಂದ ಅಬ್ಬರಿಸಿದ್ದ ಮಳೆಯು, ಗುರುವಾರ ಕ್ಷೀಣಿಸಿತ್ತು. ಬೆಳಿಗ್ಗೆ ಹದ ಮಳೆಯಾಗಿದ್ದು, ಮಧ್ಯಾಹ್ನದ ನಂತರ ಬಿಸಿಲು ಕಾಣಿಸಿಕೊಂಡಿತು.ಶಿರಸಿ, ಸಿದ್ದಾಪುರ, ಯಲ್ಲಾಪುರ ಸುತ್ತಮುತ್ತ ಬೆಳಿಗ್ಗೆ ಜೋರಾಗಿ ಮಳೆ ಸುರಿಯಿತು. ಸಂಜೆಯವರೆಗೂ ಆಗಾಗ ಜಿಟಿಜಿಟಿ ಹನಿಯುತ್ತಿತ್ತು.