<p><strong>ಹೊಸಪೇಟೆ: </strong>ಇಲ್ಲಿನ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ ಮಟ್ಟ ಸತತ ಏರುತ್ತಲೇ ಇದೆ.</p>.<p>ಕಳೆದ 24 ಗಂಟೆಗಳಲ್ಲಿ ಅಣೆಕಟ್ಟೆಗೆ ಎರಡುವರೆ ಅಡಿ ನೀರು ಹರಿದು ಬಂದಿದೆ. ಶುಕ್ರವಾರ ಮೂರು ಅಡಿ ನೀರು ಬಂದಿತ್ತು. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ 1,598.85 ಅಡಿ ನೀರಿನ ಸಂಗ್ರಹವಿದೆ. 34,374 ಕ್ಯುಸೆಕ್ ಒಳಹರಿವು ದಾಖಲಾಗಿದೆ.</p>.<p>ಶುಕ್ರವಾರ 26,007 ಕ್ಯುಸೆಕ್, ಗುರುವಾರ 16,211 ಕ್ಯುಸೆಕ್, ಬುಧವಾರ 7,321 ಕ್ಯುಸೆಕ್ ಹಾಗೂ ಮಂಗಳವಾರ 2,532 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಒಳಹರಿವು ಸತತ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ವರೆಗೆ ಇದೇ ರೀತಿ ನೀರು ಹರಿದು ಬರಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p><strong>ತಗ್ಗಿದ ಮಳೆ: </strong>ಮೂರ್ನಾಲ್ಕು ದಿನಗಳಿಂದ ಸತತವಾಗಿ ಹೊಸಪೇಟೆ ನಗರ ಹಾಗೂ ಸುತ್ತಮುತ್ತ ಮಳೆಯಾಗುತ್ತಿತ್ತು. ಶನಿವಾರ ಮಳೆ ನಿಂತಿದೆ. ಕಾರ್ಮೋಡಗಳು ಚದುರಿ ಹೋಗಿ ಬಿಸಿಲು ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಇಲ್ಲಿನ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ ಮಟ್ಟ ಸತತ ಏರುತ್ತಲೇ ಇದೆ.</p>.<p>ಕಳೆದ 24 ಗಂಟೆಗಳಲ್ಲಿ ಅಣೆಕಟ್ಟೆಗೆ ಎರಡುವರೆ ಅಡಿ ನೀರು ಹರಿದು ಬಂದಿದೆ. ಶುಕ್ರವಾರ ಮೂರು ಅಡಿ ನೀರು ಬಂದಿತ್ತು. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ 1,598.85 ಅಡಿ ನೀರಿನ ಸಂಗ್ರಹವಿದೆ. 34,374 ಕ್ಯುಸೆಕ್ ಒಳಹರಿವು ದಾಖಲಾಗಿದೆ.</p>.<p>ಶುಕ್ರವಾರ 26,007 ಕ್ಯುಸೆಕ್, ಗುರುವಾರ 16,211 ಕ್ಯುಸೆಕ್, ಬುಧವಾರ 7,321 ಕ್ಯುಸೆಕ್ ಹಾಗೂ ಮಂಗಳವಾರ 2,532 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಒಳಹರಿವು ಸತತ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ವರೆಗೆ ಇದೇ ರೀತಿ ನೀರು ಹರಿದು ಬರಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p><strong>ತಗ್ಗಿದ ಮಳೆ: </strong>ಮೂರ್ನಾಲ್ಕು ದಿನಗಳಿಂದ ಸತತವಾಗಿ ಹೊಸಪೇಟೆ ನಗರ ಹಾಗೂ ಸುತ್ತಮುತ್ತ ಮಳೆಯಾಗುತ್ತಿತ್ತು. ಶನಿವಾರ ಮಳೆ ನಿಂತಿದೆ. ಕಾರ್ಮೋಡಗಳು ಚದುರಿ ಹೋಗಿ ಬಿಸಿಲು ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>