<figcaption>""</figcaption>.<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong>ತಾಲ್ಲೂಕಿನ ಬಿಬ್ಬಳ್ಳಿ ಗ್ರಾಮದ ಬಳಿ ಶುಕ್ರವಾರ ಕಾಗಿಣಾ ನದಿಯಲ್ಲಿ ಸಿಲುಕಿದ್ದ 8 ಜನರನ್ನು ಅದೇ ಗ್ರಾಮದ ಮೀನುಗಾರ ಶರಣು ಎಂಬುವರು ರಕ್ಷಿಸಿದ್ದಾರೆ.</p>.<p>ಮರಳು ತೆಗೆಯಲು ಇವರು ಬೆಳಿಗ್ಗೆ ನದಿಗೆ ಇಳಿದಿದ್ದರು. ಗುರುವಾರ ರಾತ್ರಿ ಕಾಗಿಣಾ ಪಾತ್ರದಲ್ಲಿ ಧಾರಾಕಾರ ಮಳೆಯಾದ್ದರಿಂದ ನದಿಯಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಯಿತು. ಆಗ ಅವರೆಲ್ಲರೂ ಹೊರಬರಲಾಗದೇ ನದಿ ಮಧ್ಯದಲ್ಲಿ ಇದ್ದ ಪೊದೆಗಳ ಆಸರೆ ಪಡೆದರು.</p>.<p>ಅವರಲ್ಲಿದ್ದ ಒಬ್ಬ ಯುವಕ ತನ್ನ ಮೊಬೈಲ್ನಿಂದ ಸ್ನೇಹಿತರಿಗೆ ಕರೆ ಮಾಡಿದ. ಗ್ರಾಮದ ಜನ ಪೊಲೀಸ್ ಕಂಟ್ರೋಲ್ ರೂಂ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಸೇಡಂನ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದರು.</p>.<p>ಸಿಬ್ಬಂದಿ ಮಾರ್ಗದರ್ಶನದಂತೆ ದೋಣಿ ಮೂಲಕ ನದಿಗೆ ಇಳಿದ ಯುವಕ ಶರಣು, ಒಬ್ಬೊಬ್ಬರಾಗಿ ಎಲ್ಲರನ್ನೂ ದಡ ಸೇರಿಸಿದರು.</p>.<p><strong>ಚಿಂಚೋಳಿ: 122 ಮಿ.ಮೀ ಮಳೆ</strong></p>.<p>ಚಿಂಚೋಳಿ ಪಟ್ಟಣ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 12ರಿಂದ ಶುಕ್ರವಾರ ನಸುಕಿನ 4ಗಂಟೆಯವರೆಗೆ 122 ಮಿ.ಮೀ. ಮಳೆ ಸುರಿದಿದೆ. ಈ ಪ್ರದೇಶದಲ್ಲಿ 2014ರಲ್ಲಿ 111 ಮಿ.ಮೀ ಮಳೆ ಸುರಿದಿತ್ತು. ಆ ನಂತರದ ದಾಖಲೆ ಪ್ರಮಾಣದ ಮಳೆ ಇದಾಗಿದೆ.</p>.<p>ಚಂದಾಪುರದ 25 ಮನೆಗಳಿಗೆ ನೀರು ನುಗ್ಗಿತ್ತು. ಮುರ್ಕಿ–ಹಂದರಕಿ ರಾಜ್ಯ ಹೆದ್ದಾರಿಯ ಸೇತುವೆ ಮುಳುಗಿ 5 ತಾಸು ಸಂಚಾರ ಬಂದ್ ಆಗಿತ್ತು.ಬಹುತೇಕ ಹೊಲಗಳಲ್ಲಿ ನೀರು ನಿಂತು ಕೆರೆಗಳಂತಾಗಿವೆ. ಒಡ್ಡುಗಳು ಒಡೆದಿವೆ.</p>.<p>ಕೆಳದಂಡೆ ನಾಗರಾಳ ಜಲಾಶಯಕ್ಕೆ 1 ಮೀಟರ್ ಹಾಗೂ ಚಂದ್ರಂಪಳ್ಳಿ ಜಲಾಶಯಕ್ಕೆ 2 ಮೀಟರ್ ನೀರು ಹರಿದುಬಂದಿದೆ. ಎತ್ತಿಪೋತೆ ಜಲಪಾತ ಮೈದುಂಬಿಕೊಂಡಿದೆ.</p>.<p><strong>ಇದೇ 7ರವರೆಗೆ ಭಾರಿ ಮಳೆ?<br />ಬೆಂಗಳೂರು:</strong> ‘ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.</p>.<p>‘ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರಿ ಮಳೆಯಾಗಿದೆ. ಶನಿವಾರವೂ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಎಚ್ಚರಿಸಿದ್ದಾರೆ.</p>.<p><strong>ಎಲ್ಲೆಲ್ಲಿ ಎಷ್ಟು ಮಳೆ?:</strong> ಹೊನ್ನಾವರದಲ್ಲಿ ಶುಕ್ರವಾರ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಂಗಳೂರು, ಮೂಡುಬಿದಿರೆ 16, ಅಂಕೋಲಾ 13, ಕಾರ್ಕಳ, ಚಿಂಚೋಳಿ 12, ಭಟ್ಕಳ 11, ಉಪ್ಪಿನಂಗಡಿ, ಗೋಕರ್ಣ, ಕಾರವಾರ, ಕುಮಟಾ 10 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಸೇಡಂ (ಕಲಬುರ್ಗಿ ಜಿಲ್ಲೆ):</strong>ತಾಲ್ಲೂಕಿನ ಬಿಬ್ಬಳ್ಳಿ ಗ್ರಾಮದ ಬಳಿ ಶುಕ್ರವಾರ ಕಾಗಿಣಾ ನದಿಯಲ್ಲಿ ಸಿಲುಕಿದ್ದ 8 ಜನರನ್ನು ಅದೇ ಗ್ರಾಮದ ಮೀನುಗಾರ ಶರಣು ಎಂಬುವರು ರಕ್ಷಿಸಿದ್ದಾರೆ.</p>.<p>ಮರಳು ತೆಗೆಯಲು ಇವರು ಬೆಳಿಗ್ಗೆ ನದಿಗೆ ಇಳಿದಿದ್ದರು. ಗುರುವಾರ ರಾತ್ರಿ ಕಾಗಿಣಾ ಪಾತ್ರದಲ್ಲಿ ಧಾರಾಕಾರ ಮಳೆಯಾದ್ದರಿಂದ ನದಿಯಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಯಿತು. ಆಗ ಅವರೆಲ್ಲರೂ ಹೊರಬರಲಾಗದೇ ನದಿ ಮಧ್ಯದಲ್ಲಿ ಇದ್ದ ಪೊದೆಗಳ ಆಸರೆ ಪಡೆದರು.</p>.<p>ಅವರಲ್ಲಿದ್ದ ಒಬ್ಬ ಯುವಕ ತನ್ನ ಮೊಬೈಲ್ನಿಂದ ಸ್ನೇಹಿತರಿಗೆ ಕರೆ ಮಾಡಿದ. ಗ್ರಾಮದ ಜನ ಪೊಲೀಸ್ ಕಂಟ್ರೋಲ್ ರೂಂ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಸೇಡಂನ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದರು.</p>.<p>ಸಿಬ್ಬಂದಿ ಮಾರ್ಗದರ್ಶನದಂತೆ ದೋಣಿ ಮೂಲಕ ನದಿಗೆ ಇಳಿದ ಯುವಕ ಶರಣು, ಒಬ್ಬೊಬ್ಬರಾಗಿ ಎಲ್ಲರನ್ನೂ ದಡ ಸೇರಿಸಿದರು.</p>.<p><strong>ಚಿಂಚೋಳಿ: 122 ಮಿ.ಮೀ ಮಳೆ</strong></p>.<p>ಚಿಂಚೋಳಿ ಪಟ್ಟಣ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 12ರಿಂದ ಶುಕ್ರವಾರ ನಸುಕಿನ 4ಗಂಟೆಯವರೆಗೆ 122 ಮಿ.ಮೀ. ಮಳೆ ಸುರಿದಿದೆ. ಈ ಪ್ರದೇಶದಲ್ಲಿ 2014ರಲ್ಲಿ 111 ಮಿ.ಮೀ ಮಳೆ ಸುರಿದಿತ್ತು. ಆ ನಂತರದ ದಾಖಲೆ ಪ್ರಮಾಣದ ಮಳೆ ಇದಾಗಿದೆ.</p>.<p>ಚಂದಾಪುರದ 25 ಮನೆಗಳಿಗೆ ನೀರು ನುಗ್ಗಿತ್ತು. ಮುರ್ಕಿ–ಹಂದರಕಿ ರಾಜ್ಯ ಹೆದ್ದಾರಿಯ ಸೇತುವೆ ಮುಳುಗಿ 5 ತಾಸು ಸಂಚಾರ ಬಂದ್ ಆಗಿತ್ತು.ಬಹುತೇಕ ಹೊಲಗಳಲ್ಲಿ ನೀರು ನಿಂತು ಕೆರೆಗಳಂತಾಗಿವೆ. ಒಡ್ಡುಗಳು ಒಡೆದಿವೆ.</p>.<p>ಕೆಳದಂಡೆ ನಾಗರಾಳ ಜಲಾಶಯಕ್ಕೆ 1 ಮೀಟರ್ ಹಾಗೂ ಚಂದ್ರಂಪಳ್ಳಿ ಜಲಾಶಯಕ್ಕೆ 2 ಮೀಟರ್ ನೀರು ಹರಿದುಬಂದಿದೆ. ಎತ್ತಿಪೋತೆ ಜಲಪಾತ ಮೈದುಂಬಿಕೊಂಡಿದೆ.</p>.<p><strong>ಇದೇ 7ರವರೆಗೆ ಭಾರಿ ಮಳೆ?<br />ಬೆಂಗಳೂರು:</strong> ‘ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.</p>.<p>‘ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರಿ ಮಳೆಯಾಗಿದೆ. ಶನಿವಾರವೂ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಎಚ್ಚರಿಸಿದ್ದಾರೆ.</p>.<p><strong>ಎಲ್ಲೆಲ್ಲಿ ಎಷ್ಟು ಮಳೆ?:</strong> ಹೊನ್ನಾವರದಲ್ಲಿ ಶುಕ್ರವಾರ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಂಗಳೂರು, ಮೂಡುಬಿದಿರೆ 16, ಅಂಕೋಲಾ 13, ಕಾರ್ಕಳ, ಚಿಂಚೋಳಿ 12, ಭಟ್ಕಳ 11, ಉಪ್ಪಿನಂಗಡಿ, ಗೋಕರ್ಣ, ಕಾರವಾರ, ಕುಮಟಾ 10 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>