<p><strong>ಹೊಸಪೇಟೆ: </strong>ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಂಪಿ ಗಜಶಾಲೆ ಹಿಂಭಾಗದ ವಿಷ್ಣು ದೇವಾಲಯ ಮಂಟಪದ ಕಲ್ಲುಗಂಬಗಳನ್ನು ಯುವಕರು ಬೀಳಿಸುತ್ತಿರುವ ವಿಡಿಯೊಗೆ ಸಂಬಂಧಿಸಿ ಪೊಲೀಸರು ಶನಿವಾರ ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.</p>.<p>ಘಟನೆ ಜತೆ ತಳಕು ಹಾಕಿಕೊಂಡಿರುವ ಬಲವಾದ ಅನುಮಾನದ ಮೇರೆಗೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಯಾವುದೇ ಸಕಾರಣವಿಲ್ಲದೆ ಯುವಕನನ್ನು ವಶಕ್ಕೆ ಪಡೆದಿರುವುದಕ್ಕೆ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿ, ಕಮಲಾಪುರ ಠಾಣೆ ಬಳಿ ಸೇರಿದ್ದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಹಾಗೂ ಸ್ಥಳೀಯರ ನಡುವೆ ವಾಗ್ವಾದ, ಜಟಾಪಟಿ ಕೂಡ ನಡೆದಿದೆ.</p>.<p>‘ಯಾವ ಕಾರಣಕ್ಕೆ ಯುವಕನನ್ನು ವಶಕ್ಕೆ ಪಡೆದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಕೂಡಲೇ ಯುವಕನನ್ನು ಬಿಡುಗಡೆ ಮಾಡಬೇಕು’ ಎಂದು ಸ್ಥಳೀಯರು ಪಟ್ಟು ಹಿಡಿದರು. ಅದಕ್ಕೆ ಎಸ್ಪಿ ಜಗ್ಗಲಿಲ್ಲ. ‘ಅದನ್ನೆಲ್ಲ ನಿಮಗೆ ತಿಳಿಸಲು ಆಗುವುದಿಲ್ಲ. ನೀವೆಲ್ಲರೂ ಇಲ್ಲಿಂದ ಹೋಗಬೇಕು’ ಎಂದು ತಾಕೀತು ಮಾಡಿ, ಕಳುಹಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bellary/hampi-monument-stone-damage-611611.html" target="_blank">ಹಂಪಿ ಸ್ಮಾರಕದ ಕಲ್ಲು ಬೀಳಿಸುವ ವಿಡಿಯೊ ವೈರಲ್</a></p>.<p>ಈ ಕುರಿತು ಅರುಣ್ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, ‘ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಈಗ ಏನನ್ನೂ ಕೇಳಬೇಡಿ’ ಎಂದಷ್ಟೇ ಪ್ರತಿಕ್ರಿಯಿಸಿದರು.</p>.<p>ಇದಕ್ಕೂ ಮುನ್ನ ಅವರು ಘಟನೆ ನಡೆದ ವಿಷ್ಣು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಂಟಪದ ಬಳಿ ಸಾಲಾಗಿ ಬಿದ್ದಿರುವ ಕಲ್ಲುಗಂಬಗಳನ್ನು ಪರಿಶೀಲಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೈರಲ್ ಆಗಿರುವ ವಿಡಿಯೊ ನೋಡಿದ್ದೇನೆ. ನಾಲ್ವರು ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲ್ನೊಟಕ್ಕೆ ಕಂಡು ಬರುತ್ತಿದೆ.ಆರು ತಿಂಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆ ಇದೆ. ಆದರೆ, ಭಾರತೀಯ ಪುರಾತತ್ವ ಇಲಾಖೆಯ (ಎ.ಎಸ್.ಐ.) ಅಧಿಕಾರಿಗಳು, ಈ ಘಟನೆ ಎರಡು ವರ್ಷಗಳ ಹಿಂದೆ ನಡೆದಿರಬಹುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಎಲ್ಲ ಕೋನಗಳಲ್ಲಿ ತನಿಖೆ ನಡೆಸಿ, ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಲಾಗುವುದು’ ಎಂದು ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/stories/stateregional/hampi-arrest-those-who-ruined-611744.html">ಸ್ಮಾರಕದ ಕಲ್ಲು ಬೀಳಿಸಿದ ದುಷ್ಟರನ್ನು ಬಂಧಿಸಿ: ಪೊಲೀಸರಿಗೆ ಜನರ ತಾಕೀತು</a></strong></p>.<p>ಈ ಕುರಿತು ಮಾಹಿತಿಗೆ ಸಂಪರ್ಕಿಸಿದಾಗ ಎ.ಎಸ್.ಐ. ಕಿರಿಯ ಅಧಿಕಾರಿಗಳಿಂದ ಹಿಡಿದು ಹಿರಿಯ ಅಧಿಕಾರಿಗಳ ವರೆಗೆ ಎಲ್ಲರೂ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಶುಕ್ರವಾರ ಕೂಡ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.</p>.<p><strong>ರಸ್ತೆತಡೆ</strong></p>.<p>ಹಂಪಿ ಸ್ಮಾರಕಗಳಿಗೆ ಹಾನಿ ಉಂಟು ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿಸಮಾನ ಮನಸ್ಕರ ವೇದಿಕೆಯ ಕಾರ್ಯಕರ್ತರು ಕೆಲಕಾಲ ಹೊಸಪೇಟೆ–ಕಂಪ್ಲಿ ರಸ್ತೆತಡೆ ನಡೆಸಿದರು. ‘ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಸ್ಪಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಂಪಿ ಗಜಶಾಲೆ ಹಿಂಭಾಗದ ವಿಷ್ಣು ದೇವಾಲಯ ಮಂಟಪದ ಕಲ್ಲುಗಂಬಗಳನ್ನು ಯುವಕರು ಬೀಳಿಸುತ್ತಿರುವ ವಿಡಿಯೊಗೆ ಸಂಬಂಧಿಸಿ ಪೊಲೀಸರು ಶನಿವಾರ ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.</p>.<p>ಘಟನೆ ಜತೆ ತಳಕು ಹಾಕಿಕೊಂಡಿರುವ ಬಲವಾದ ಅನುಮಾನದ ಮೇರೆಗೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಯಾವುದೇ ಸಕಾರಣವಿಲ್ಲದೆ ಯುವಕನನ್ನು ವಶಕ್ಕೆ ಪಡೆದಿರುವುದಕ್ಕೆ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿ, ಕಮಲಾಪುರ ಠಾಣೆ ಬಳಿ ಸೇರಿದ್ದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಹಾಗೂ ಸ್ಥಳೀಯರ ನಡುವೆ ವಾಗ್ವಾದ, ಜಟಾಪಟಿ ಕೂಡ ನಡೆದಿದೆ.</p>.<p>‘ಯಾವ ಕಾರಣಕ್ಕೆ ಯುವಕನನ್ನು ವಶಕ್ಕೆ ಪಡೆದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಕೂಡಲೇ ಯುವಕನನ್ನು ಬಿಡುಗಡೆ ಮಾಡಬೇಕು’ ಎಂದು ಸ್ಥಳೀಯರು ಪಟ್ಟು ಹಿಡಿದರು. ಅದಕ್ಕೆ ಎಸ್ಪಿ ಜಗ್ಗಲಿಲ್ಲ. ‘ಅದನ್ನೆಲ್ಲ ನಿಮಗೆ ತಿಳಿಸಲು ಆಗುವುದಿಲ್ಲ. ನೀವೆಲ್ಲರೂ ಇಲ್ಲಿಂದ ಹೋಗಬೇಕು’ ಎಂದು ತಾಕೀತು ಮಾಡಿ, ಕಳುಹಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bellary/hampi-monument-stone-damage-611611.html" target="_blank">ಹಂಪಿ ಸ್ಮಾರಕದ ಕಲ್ಲು ಬೀಳಿಸುವ ವಿಡಿಯೊ ವೈರಲ್</a></p>.<p>ಈ ಕುರಿತು ಅರುಣ್ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, ‘ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಈಗ ಏನನ್ನೂ ಕೇಳಬೇಡಿ’ ಎಂದಷ್ಟೇ ಪ್ರತಿಕ್ರಿಯಿಸಿದರು.</p>.<p>ಇದಕ್ಕೂ ಮುನ್ನ ಅವರು ಘಟನೆ ನಡೆದ ವಿಷ್ಣು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಂಟಪದ ಬಳಿ ಸಾಲಾಗಿ ಬಿದ್ದಿರುವ ಕಲ್ಲುಗಂಬಗಳನ್ನು ಪರಿಶೀಲಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೈರಲ್ ಆಗಿರುವ ವಿಡಿಯೊ ನೋಡಿದ್ದೇನೆ. ನಾಲ್ವರು ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲ್ನೊಟಕ್ಕೆ ಕಂಡು ಬರುತ್ತಿದೆ.ಆರು ತಿಂಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆ ಇದೆ. ಆದರೆ, ಭಾರತೀಯ ಪುರಾತತ್ವ ಇಲಾಖೆಯ (ಎ.ಎಸ್.ಐ.) ಅಧಿಕಾರಿಗಳು, ಈ ಘಟನೆ ಎರಡು ವರ್ಷಗಳ ಹಿಂದೆ ನಡೆದಿರಬಹುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಎಲ್ಲ ಕೋನಗಳಲ್ಲಿ ತನಿಖೆ ನಡೆಸಿ, ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಲಾಗುವುದು’ ಎಂದು ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/stories/stateregional/hampi-arrest-those-who-ruined-611744.html">ಸ್ಮಾರಕದ ಕಲ್ಲು ಬೀಳಿಸಿದ ದುಷ್ಟರನ್ನು ಬಂಧಿಸಿ: ಪೊಲೀಸರಿಗೆ ಜನರ ತಾಕೀತು</a></strong></p>.<p>ಈ ಕುರಿತು ಮಾಹಿತಿಗೆ ಸಂಪರ್ಕಿಸಿದಾಗ ಎ.ಎಸ್.ಐ. ಕಿರಿಯ ಅಧಿಕಾರಿಗಳಿಂದ ಹಿಡಿದು ಹಿರಿಯ ಅಧಿಕಾರಿಗಳ ವರೆಗೆ ಎಲ್ಲರೂ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಶುಕ್ರವಾರ ಕೂಡ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.</p>.<p><strong>ರಸ್ತೆತಡೆ</strong></p>.<p>ಹಂಪಿ ಸ್ಮಾರಕಗಳಿಗೆ ಹಾನಿ ಉಂಟು ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿಸಮಾನ ಮನಸ್ಕರ ವೇದಿಕೆಯ ಕಾರ್ಯಕರ್ತರು ಕೆಲಕಾಲ ಹೊಸಪೇಟೆ–ಕಂಪ್ಲಿ ರಸ್ತೆತಡೆ ನಡೆಸಿದರು. ‘ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಸ್ಪಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>