‘ಇದು ಮತ್ತೊಂದು ಸುತ್ತಿನ ‘ಆಪರೇಷನ್ ಕಮಲ’ದ ಸಾಧ್ಯತೆಗಿಂತ ಇಬ್ಬರೂ ತಮ್ಮ ರಾಜಕೀಯ ಎದುರಾಳಿಗಳಾದ ಉಮೇಶ ಕತ್ತಿ ಹಾಗೂ ಕಾಂಗ್ರೆಸ್ನ ಡಿ.ಕೆ. ಶಿವಕುಮಾರ್ ಅವರ ಕಾಲೆಳೆಯಲು ಉರುಳಿಸಿದ ದಾಳ. ಆದರೆ, ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿಗೆ ಹೋಗುವ ಸ್ಥಿತಿಯಲ್ಲಿ ಇಲ್ಲ. ಈ ಹಿಂದೆ ಪಕ್ಷ ಬಿಟ್ಟವರ ಪಾಡು ಏನಾಗಿದೆ ಎಂಬುದು ಕಣ್ಣ ಮುಂದೆಯೇ ಇದೆ’ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು.