‘ಹಣಕ್ಕಾಗಿ ಹೋದವರು ಯಾರೂ ಇಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ನನ್ನ ಮೇಲೂ ಆರೋಪ ಮಾಡಿದ್ದರು. ಆದರೆ ಜನರು ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಒಂದು ಲಕ್ಷ ಮತದಿಂದ, ವಿಧಾನಸಭೆ ಚುನಾವಣೆಯಲ್ಲಿ ನನ್ನ ಮಗ ಅವಿನಾಶ್ ಜಾಧವನನ್ನು ಹತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ದಾರೆ. ಯಾರ ಮನವನ್ನೂ ವಿನಾಕಾರಣ ನೋಯಿಸುವ ಕೆಲಸ ಮಾಡಬಾರದು’ ಎಂದು ತಿಳಿಸಿದರು.