<p><strong>ಉಡುಪಿ:</strong>ಸಂಸ್ಕೃತಿಯ ಮೇಲೂ ಸುಂಕ ಹಾಕುತ್ತಿರುವ ಸರ್ಕಾರದ ಕ್ರಮ ಖಂಡನೀಯ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಎಂ.ಎಸ್.ಸತ್ಯು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪುರಭವನದಲ್ಲಿ ಮಂಗಳವಾರ ನಡೆದ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಂಗಭೂಮಿ, ಸಂಸ್ಕೃತಿ ಬೆಳವಣಿಗೆಗೆ ಸರ್ಕಾರ ಬೆಂಬಲ ನೀಡಬೇಕು. ಬದಲಾಗಿ ಹಾಡು, ನೃತ್ಯ, ಕವಿ ಸಮ್ಮೇಳನಗಳ ಮೇಲೂ ಶೇ 18ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಯಾವ ನ್ಯಾಯ. ಈ ವಿಚಾರದಲ್ಲಿ ರಂಗಕರ್ಮಿಗಳು ಆಂದೋಲನ ಆರಂಭಿಸಬೇಕು. ಬುದ್ಧಿ ಇಲ್ಲದ ಸರ್ಕಾರಕ್ಕೆ ದೊಣ್ಣೆ ಅಥವಾ ಮಾತಿನ ಮೂಲಕ ಎಚ್ಚರಿಕೆ ನೀಡಬೇಕು ಎಂದರು.</p>.<p>ಬೆಂಗಳೂರಿನಲ್ಲಿ ಪಿಟೀಲು ಚೌಡಯ್ಯ ಅವರ ಸ್ಮಾರಕ ಹಾಗೂ ರಂಗಮಂದಿರ ನಿರ್ಮಾಣಕ್ಕೆ ಹಿಂದೆ ರಾಜ್ಯ ಸರ್ಕಾರ ಒಂದು ರೂಪಾಯಿಗೆ ಜಮೀನು ನೀಡಿತ್ತು. ಆದರೆ, ಎಷ್ಟು ಬಾಡಿಗೆ ಪಡೆಯಬೇಕು ಎಂಬ ನಿಯಮ ರೂಪಿಸಲಿಲ್ಲ, ಪರಿಣಾಮ, ಮನಸ್ಸಿಗೆ ಬಂದಷ್ಟು ಬಾಡಿಗೆ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong>ಸಂಸ್ಕೃತಿಯ ಮೇಲೂ ಸುಂಕ ಹಾಕುತ್ತಿರುವ ಸರ್ಕಾರದ ಕ್ರಮ ಖಂಡನೀಯ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಎಂ.ಎಸ್.ಸತ್ಯು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪುರಭವನದಲ್ಲಿ ಮಂಗಳವಾರ ನಡೆದ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಂಗಭೂಮಿ, ಸಂಸ್ಕೃತಿ ಬೆಳವಣಿಗೆಗೆ ಸರ್ಕಾರ ಬೆಂಬಲ ನೀಡಬೇಕು. ಬದಲಾಗಿ ಹಾಡು, ನೃತ್ಯ, ಕವಿ ಸಮ್ಮೇಳನಗಳ ಮೇಲೂ ಶೇ 18ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಯಾವ ನ್ಯಾಯ. ಈ ವಿಚಾರದಲ್ಲಿ ರಂಗಕರ್ಮಿಗಳು ಆಂದೋಲನ ಆರಂಭಿಸಬೇಕು. ಬುದ್ಧಿ ಇಲ್ಲದ ಸರ್ಕಾರಕ್ಕೆ ದೊಣ್ಣೆ ಅಥವಾ ಮಾತಿನ ಮೂಲಕ ಎಚ್ಚರಿಕೆ ನೀಡಬೇಕು ಎಂದರು.</p>.<p>ಬೆಂಗಳೂರಿನಲ್ಲಿ ಪಿಟೀಲು ಚೌಡಯ್ಯ ಅವರ ಸ್ಮಾರಕ ಹಾಗೂ ರಂಗಮಂದಿರ ನಿರ್ಮಾಣಕ್ಕೆ ಹಿಂದೆ ರಾಜ್ಯ ಸರ್ಕಾರ ಒಂದು ರೂಪಾಯಿಗೆ ಜಮೀನು ನೀಡಿತ್ತು. ಆದರೆ, ಎಷ್ಟು ಬಾಡಿಗೆ ಪಡೆಯಬೇಕು ಎಂಬ ನಿಯಮ ರೂಪಿಸಲಿಲ್ಲ, ಪರಿಣಾಮ, ಮನಸ್ಸಿಗೆ ಬಂದಷ್ಟು ಬಾಡಿಗೆ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>