ಪುರಭವನದಲ್ಲಿ ಮಂಗಳವಾರ ನಡೆದ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಂಗಭೂಮಿ, ಸಂಸ್ಕೃತಿ ಬೆಳವಣಿಗೆಗೆ ಸರ್ಕಾರ ಬೆಂಬಲ ನೀಡಬೇಕು. ಬದಲಾಗಿ ಹಾಡು, ನೃತ್ಯ, ಕವಿ ಸಮ್ಮೇಳನಗಳ ಮೇಲೂ ಶೇ 18ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಯಾವ ನ್ಯಾಯ. ಈ ವಿಚಾರದಲ್ಲಿ ರಂಗಕರ್ಮಿಗಳು ಆಂದೋಲನ ಆರಂಭಿಸಬೇಕು. ಬುದ್ಧಿ ಇಲ್ಲದ ಸರ್ಕಾರಕ್ಕೆ ದೊಣ್ಣೆ ಅಥವಾ ಮಾತಿನ ಮೂಲಕ ಎಚ್ಚರಿಕೆ ನೀಡಬೇಕು ಎಂದರು.