ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಜನ್ಮ ದಿನ: ಭರ್ಜರಿ ಉಡುಗೊರೆ

Last Updated 6 ಅಕ್ಟೋಬರ್ 2019, 20:12 IST
ಅಕ್ಷರ ಗಾತ್ರ

ಸೂಲಿಬೆಲೆ: ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಮತ್ತು ಶಿವನಾಪುರ ಗ್ರಾಮಗಳಲ್ಲಿ ಹೊಸಕೋಟೆಯ ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಅವರು ಭಾನುವಾರ ಸುಮಾರು ಎರಡು ಸಾವಿರ ಸೀರೆ, ಕಂಬಳಿ ಹಂಚಿದರು.

ನಾಗರಾಜ್‌ ಅವರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಲಾಯಿತು. ಶನಿವಾರ ಈ ಗ್ರಾಮಗಳಲ್ಲಿ ಮನೆ ಮನೆಗೆ ಟೋಕನ್‌ ಹಂಚಲಾಗಿತ್ತು. ಅದನ್ನು ತಂದ ಮಹಿಳೆಯರಿಗೆ ಸೀರೆ, ಪುರುಷರಿಗೆ ಕಂಬಳಿಯನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮಕ್ಕೆ ಬಂದವರು ಬಿರಿಯಾನಿಯನ್ನೂ ಸವಿದರು.

ಚುನಾವಣೆ ಗಿಮಿಕ್:ಈ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಕಾರಣ ಮತದಾರರ ಬೇಟೆ ಈಗಿನಿಂದಲೇ ಪ್ರಾರಂಭವಾಗಿದ್ದು ಇದು ಚುನಾವಣೆಯ ಗಿಮಿಕ್ ಎಂಬ ಟೀಕೆ ಸಾರ್ವಜನಿಕ ವಲಯದಲ್ಲಿ ಕೇಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT