‘ಮಹಾಮಸ್ತಕಾಭಿಷೇಕ ವೀಕ್ಷಿಸಲು ಜಗತ್ತಿನ ವಿವಿಧೆಡೆಯಿಂದ ಭಕ್ತರು ಬರುತ್ತಿದ್ದಾರೆ. ಈ ಪುಣ್ಯದ ಕಾರ್ಯಕ್ರಮದಲ್ಲಿ ನಮ್ಮ ಗ್ರಾಮೀಣ ಕ್ಷೇತ್ರದ ಭಕ್ತರೂ ಪಾಲ್ಗೊಳ್ಳಬೇಕು ಎಂಬ ಮಹದಾಸೆಯಿಂದ, ಒಪ್ಪಂದದ ಮೇಲೆ ಸಾರಿಗೆ ಸಂಸ್ಥೆಯಿಂದ 14 ಬಸ್ಸುಗಳನ್ನು ಪಡೆದು, ಯಾತ್ರೆ ವ್ಯವಸ್ಥೆ ಮಾಡಿಕೊಟ್ಟಿದ್ದೇನೆ. ಪ್ರತಿಷ್ಠಾನದಿಂದ ಇಂತಹ ಹತ್ತು ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇನೆ’ ಎಂದು ಲಕ್ಷ್ಮಿ ತಿಳಿಸಿದರು.