ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವಿರುದ್ಧ ಹೇಳಿಕೆ: ಮುನಿಯಪ್ಪ ಬಣದ 7 ಮಂದಿ ಅಮಾನತು

Last Updated 18 ಅಕ್ಟೋಬರ್ 2019, 14:13 IST
ಅಕ್ಷರ ಗಾತ್ರ

ಕೋಲಾರ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಆರೋಪ ಮಾಡಿ ವರಿಷ್ಠರಿಗೆ ದೂರು ನೀಡುವುದಾಗಿ ಹೇಳಿದ್ದ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪರ ಬಣದ ಏಳು ಮಂದಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಕೋಲಾರ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸಾದ್‌ಬಾಬು, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕುಮಾರ್‌, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅತಾವುಲ್ಲಾ ಖಾನ್‌, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಇಕ್ಬಾಲ್‌ ಅಹಮ್ಮದ್‌, ಜಿಲ್ಲಾ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್‌, ಎಸ್‌ಟಿ ಘಟಕದ ಅಧ್ಯಕ್ಷ ನಾಗರಾಜ್‌ ಮತ್ತು ಪಕ್ಷದ ಸದಸ್ಯ ಎಲ್.ಕಲೀಲ್‌ ಅವರನ್ನು ಅಮಾನತು ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡಿರುವ 7 ಮಂದಿಯೂ ಕೆ.ಎಚ್‌.ಮುನಿಯಪ್ಪರ ಬಣದಲ್ಲಿ ಗುರುತಿಸಿಕೊಂಡಿದ್ದು, ಲೋಕಸಭಾ ಚುನಾವಣೆ ಸೋಲಿನ ಸಂಬಂಧ ಜಿಲ್ಲಾ ಕೇಂದ್ರದಲ್ಲಿ ಗುರುವಾರ (ಅ.17) ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ಹೇಳಿಕೆ ನೀಡಿದ್ದರು.

ಅಲ್ಲದೇ, ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್‌.ಮುನಿಯಪ್ಪರ ಸೋಲಿಗೆ ಕಾಂಗ್ರೆಸ್‌ ಶಾಸಕರಾದ ಕೆ.ಆರ್‌.ರಮೇಶ್‌ಕುಮಾರ್‌, ವಿ.ಮುನಿಯಪ್ಪ, ಎಸ್‌.ಎನ್‌.ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ನಸೀರ್‌ ಅಹಮ್ಮದ್‌, ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಕಾರಣರೆಂದು ಆರೋಪಿಸಿದ್ದರು. ಜತೆಗೆ ರಮೇಶ್‌ಕುಮಾರ್‌ ಬಣದ ವಿರುದ್ಧ ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಗೆ ದೂರು ನೀಡಿ ಪಕ್ಷದಿಂದ ಉಚ್ಛಾಟಿಸುವಂತೆ ಆಗ್ರಹಿಸಿದ್ದರು.

ಇದೀಗ ಈ ನಾಯಕರಿಗೆ ತಮ್ಮ ಹೇಳಿಕೆಯೇ ತಿರುಗು ಬಾಣವಾಗಿದೆ. ಈ 7 ಮುಖಂಡರೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರೆಲ್ಲರನ್ನೂ ಅಮಾನತು ಮಾಡಲಾಗಿದೆ ಎಂದು ಘೋರ್ಪಡೆ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT