ಕೋಲಾರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅತಾವುಲ್ಲಾ ಖಾನ್, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಇಕ್ಬಾಲ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಮತ್ತು ಪಕ್ಷದ ಸದಸ್ಯ ಎಲ್.ಕಲೀಲ್ ಅವರನ್ನು ಅಮಾನತು ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ.