ಚುನಾವಣೆಗೆ ಮುನ್ನವೇ ರಾವ್ ಅವರನ್ನು ಬದಲಿಸಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದರು. ಬಳಿಕ ಪ್ರಸ್ತಾಪ ಕೈಬಿಟ್ಟಿದ್ದರು. ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್, ಪೀಯೂಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ಚುನಾವಣಾ ರಣತಂತ್ರ ಹೆಣೆಯುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.