ಬೆಂಗಳೂರು: ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂ.ಎನ್.ಮೋಹನ್ ಕುಮಾರ್ (28) ಎಂಬಾತನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2019ರಲ್ಲಿ ಲಕ್ಷ್ಮೀನಾರಾಯಣ ಅವರ ಕೊಲೆ ಆಗಿತ್ತು.ಅಂದಿನಿಂದಲೇ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಇತ್ತೀಚೆಗೆ ಆತನ ಬಗ್ಗೆ ಮಾಹಿತಿ ಕಲೆಹಾಕಿದ್ದ ಸಿಸಿಬಿ ಪೊಲೀಸರು, ಆತನನ್ನು ಬಂಧಿಸಿ ಮಾದನಾಯಕನಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
'ಬಂಧಿತ ಆರೋಪಿ ಮೋಹನ್ ಕುಮಾರ್, ಜೆ.ಟಿ.ವಿ ಹೆಸರಿನ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಅದರ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಆತನೇ ಆಗಿದ್ದ. ಜೊತೆಗೆ ಟಿ.ವಿ.6 ಎಂಬ ಯುಟ್ಯೂಬ್ ಚಾನೆಲ್ ಸಹ ಆರಂಭಿಸಿ ಸಿಇಒ ಆಗಿದ್ದ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.