ಪೋಷಕರ ಬುದ್ದಿಮಾತಿಗೆ ಮಣಿಯದ ಸಂಧ್ಯಾ ಜೈಲಿನಲ್ಲಿರುವ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದರು. ಇದರಿಂದ ರೋಸಿ ಹೋದ ಅವರ ತಾಯಿ, ಸಹೋದರ, ಹಿರಿಯ ಮಗಳು ಮತ್ತು ಅಳಿಯ ಜತೆ ಸೇರಿ ಕೊಲೆ ಮಾಡಿ. ಪ್ರಕರಣ ಮುಚ್ಚಿ ಹಾಕುವ ಉದ್ದೇಶದಿಂದ ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದಿದ್ದರು ಎಂದು ಪೊಲೀಸರು ತಿಳಿಸಿದರು.