ದಿನೇಶ್ ಝೀನತ್ ಮೊಬೈಲ್ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆ, ವ್ಯಕ್ತಿಯನ್ನು ಪಡುಬಿದ್ರಿ ಬಸ್ ನಿಲ್ದಾಣಕ್ಕೆ ಬರಲು ಹೇಳಿದ್ದರು. ತಂದೆ ಇಬ್ರಾಹಿಂ ಜತೆಗೆ ಬಂದಿದ್ದ ಝೀನತ್ ಸಾರ್ವಜನಿಕವಾಗಿ ದಿನೇಶ್ ಕೆನ್ನೆಗೆ ಬಾರಿಸಿದ್ದರು. ಬಳಿಕ ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ರಿಕ್ಷಾದಲ್ಲಿ ಕರೆದುಕೊಂಡ ಹೋಗಲಾಯಿತು. ಆದರೆ, ಈ ವೇಳೆ ದಿನೇಶ್ ಮೃತಪಟ್ಟಿದ್ದರು. ಈ ಸಾವಿನ ಬಗ್ಗೆ ಸಂಶಯವಿರುವುದಾಗಿ ದಿನೇಶ್ ಸಹೋದರ ದೂರು ನೀಡಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.