ವೈದ್ಯ ಪಿಟೀಲು ವಾದಕ:ಎಸ್ಎಸ್ಕೆಎಂ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಕಾರ್ ಸ್ವತಃ ಪಿಟೀಲು ವಾದಕ. ಪಶ್ಚಿಮ ಬಂಗಾಳ ಆಕಾಶವಾಣಿಯಲ್ಲಿ ಕಲಾವಿದರಾಗಿದ್ದವರು. ಹೃದ್ರೋಗ ಅರಿವಳಿಕೆ ತಜ್ಞರಾದ ಅವರು 2011ರಿಂದಲೂ ಸಂಗೀತ ಚಿಕಿತ್ಸೆ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಸಂಗೀತಾ ಅವರಿಗೆ ಸ್ವರ ಚಿಕಿತ್ಸೆ ಕೊಡಿಸಲು ಅವರು ನಿರ್ಧರಿಸಿದರು. ಎನ್.ರಾಜಂ ನುಡಿಸಿರುವ 24 ನಿಮಿಷಗಳ ‘ದರ್ಬಾರಿ ಕಾನಡ’ ರಾಗದ ಪ್ರಸ್ತುತಿಯನ್ನು ನಿತ್ಯ ಮೂರು ಬಾರಿ ಕೇಳಿಸಿದರು. ಜೊತೆಗೆ ಔಷಧವನ್ನೂ ಮುಂದುವ
ರಿಸಿದರು. ಎರಡು ವಾರಗಳಲ್ಲಿ ಕೋಮಾದಿಂದ ಹೊರಬಂದರು. ‘ತೆರೆದ ಹೃದಯದ ಶಸ್ತ್ರಚಿಕಿತ್ಸೆ ವೇಳೆ ರಾಗ ಚಿಕಿತ್ಸೆ ನೀಡುತ್ತಿದ್ದೆ. ಆದರೆ, ಫಲಿತಾಂಶ ತಿಳಿಯುತ್ತಿರಲಿಲ್ಲ. ಈಗ ನನ್ನ ಸಂಶೋಧನೆಗೆ ಮೊದಲ ಬಾರಿ ಫಲ ಸಿಕ್ಕಿದೆ. ಇನ್ನು 15 ದಿನಗಳಲ್ಲಿ ಸಂಗೀತಾ ಸಂಪೂರ್ಣ ಗುಣಮುಖರಾಗುವರು’ ಎಂದು ಡಾ. ಸಂದೀಪ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.