ನಿರ್ಬಂಧದ ಆದೇಶದಿಂದ ಬಡವರಿಗೆ ತೊಂದರೆಯಾಗುತ್ತಿರುವ ಅರಿವು ನಮಗಿದೆ. ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಒದಗಿಸಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೀಗಾಗಿ ಬಡವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಹಾಯಧನ ಮತ್ತು2 ತಿಂಗಳ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ವೃದ್ಧಾಪ್ಯ ವೇತನವೂ ಸೇರಿದಂತೆ ಎಲ್ಲ ಬಗೆಯ ಪಿಂಚಣಿಗಳಎರಡು ತಿಂಗಳ ಮೊತ್ತ ಪಾವತಿಸುತ್ತೇವೆ ಎಂದು ಭರವಸೆ ನೀಡಿದರು.