‘ಬಳ್ಳಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, ಹದಿನೆಂಟು ದಿನದಲ್ಲಿ ಕನ್ನಡ ಕಲಿತು, ನಮ್ಮ ಕುಟುಂಬವಲ್ಲದೆ ಇಡೀ ವಿಶ್ವದ ಗಮನ ಸೆಳೆದ ಅಪ್ರತಿಮ ಮೇಧಾವಿ ಅವರು. ಸತತಹದಿಮೂರು ವರ್ಷಗಳ ಕಾಲ ಕೊಟ್ಟ ಮಾತಿನಂತೆ ಬಳ್ಳಾರಿಗೆ ಬಂದು, ನಾವು ನಡೆಸುವ ಐತಿಹಾಸಿಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡಿದ್ದು ಪೂರ್ವಜನ್ಮದ ಪುಣ್ಯವೆಂದೇ ಭಾವಿಸುತ್ತೇನೆ’ ಎಂದಿದ್ದಾರೆ.