‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.
‘ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಜತೆ ಚರ್ಚಿಸಲು ಬಂದಿದ್ದೇನೆ. ರಾಜಕೀಯ ವಿಷಯದ ಬಗ್ಗೆ ಮಾತನಾಡಿಲ್ಲ.ಈ ಭೇಟಿಕುರಿತು ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದರು.