ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ವೇದಿಕೆಯಲ್ಲಿ ಭಾವುಕರಾದ ಪ್ರಮೋದಾ ದೇವಿ ಒಡೆಯರ್

Last Updated 2 ಜೂನ್ 2019, 13:16 IST
ಅಕ್ಷರ ಗಾತ್ರ

ಮೈಸೂರು:‘ಸ್ವಂತಕ್ಕಾಗಿ ಎಂದೂ ಚಿಂತಿಸದೇ ಇದ್ದ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಜೀವನದುದ್ದಕ್ಕೂ ಕಷ್ಟದ ಹಾದಿಯನ್ನೇ ತುಳಿದರು’ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಕಣ್ಣೀರಿಟ್ಟರು.

ಮೈಸೂರು ರಾಜವಂಶಸ್ಥರು ಸ್ಥಾಪಿಸಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಅವರು ಭಾವುಕರಾದರು.

‘ನಲವತ್ತು ವರ್ಷಗಳ ಪತಿಯೊಂದಿಗಿನ ಒಡನಾಟ ನನ್ನನ್ನು ಗಟ್ಟಿಗೊಳಿಸಿತು. ಅವರು ಕಲಾರಾಧಕರರಾಗಿದ್ದರು. ಹೃದಯ ವೈಶಾಲ್ಯತೆ ಹೊಂದಿದ್ದರು. ಯಾರಿಗೂ ಕೇಡು ಬಯಸಿರಲಿಲ್ಲ. ಆದರೆ, ರಾಜವಂಶಕ್ಕೆ ನ್ಯಾಯಬದ್ಧವಾಗಿ ಸಿಗಬೇಕಿದ್ದ ಆಸ್ತಿಯನ್ನು ಉಳಿಸಿಕೊಳ್ಳಲು ಅವರು ಕಾನೂನು ಹೋರಾಟ ನಡೆಸಿದ್ದು ಅವರನ್ನು ಬಳಲಿಸಿತು’ಎಂದು ಸ್ಮರಿಸಿದರು.

ಅವರು ಸೂಕ್ಷ್ಮ ಸ್ವಭಾವದ ವ್ಯಕ್ತಿ ಹಾಗೂ ಅತ್ಯುತ್ತಮ ಪತಿಯಾಗಿದ್ದರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT