‘ನಲವತ್ತು ವರ್ಷಗಳ ಪತಿಯೊಂದಿಗಿನ ಒಡನಾಟ ನನ್ನನ್ನು ಗಟ್ಟಿಗೊಳಿಸಿತು. ಅವರು ಕಲಾರಾಧಕರರಾಗಿದ್ದರು. ಹೃದಯ ವೈಶಾಲ್ಯತೆ ಹೊಂದಿದ್ದರು. ಯಾರಿಗೂ ಕೇಡು ಬಯಸಿರಲಿಲ್ಲ. ಆದರೆ, ರಾಜವಂಶಕ್ಕೆ ನ್ಯಾಯಬದ್ಧವಾಗಿ ಸಿಗಬೇಕಿದ್ದ ಆಸ್ತಿಯನ್ನು ಉಳಿಸಿಕೊಳ್ಳಲು ಅವರು ಕಾನೂನು ಹೋರಾಟ ನಡೆಸಿದ್ದು ಅವರನ್ನು ಬಳಲಿಸಿತು’ಎಂದು ಸ್ಮರಿಸಿದರು.