ಮೈಸೂರು: ನಂಜನಗೂಡು ತಾಲ್ಲೂಕಿನ ಕಸವನಹಳ್ಳಿ ಸಮೀಪ ದ್ವಿಚಕ್ರ ವಾಹನವು ವಿದ್ಯುತ್ ಕಂಬಕ್ಕೆ ಬುಧವಾರ ಬೆಳಿಗ್ಗೆ ಡಿಕ್ಕಿ ಹೊಡೆದಿದ್ದರಿಂದಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಒಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.
ವಿದ್ಯಾರ್ಥಿ ಮಣಿಕಂಠ (16) ಸ್ಥಳದಲ್ಲೇ ಮೃತಪಟ್ಟರೆ,ಮತ್ತೊಬ್ಬದರ್ಶನ್ (16) ಗಾಯಗೊಂಡಿದ್ದಾರೆ.
ಘಟನೆ ವಿವರ:
ಹಗಿನವಾಳು ಗ್ರಾಮದಿಂದ ಕಸವನಹಳ್ಳಿಯ ಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಇವರಿಬ್ಬರೂ ಬೈಕ್ನಲ್ಲಿ ತೆರಳುತ್ತಿದ್ದರು. ಆಗ ನಿಯಂತ್ರಣ ತಪ್ಪಿದ ಬೈಕ್ ಕಸವನಹಳ್ಳಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ತೀವ್ರವಾಗಿ ಗಾಯಗೊಂಡ ಮಣಿಕಂಠ ಮೃತಪಟ್ಟರೆ, ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಬೈಕ್ನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಮಲ್ಲೇಶ್ಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.